ಬಿಜೆಪಿ ತೊರೆದು ಕಾಂಗ್ರೆಸ್ ಗೆ ಎಂಟ್ರಿ ಕೊಟ್ಟ ಬಿಜೆಪಿಯ ಬಲಿಷ್ಠ ನಾಯಕ! ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಗ್ಯರಂಟೀ!! ಮತ್ತಷ್ಟು ಬಲಿಷ್ಠವಾಯ್ತು ಕಾಂಗ್ರೆಸ್!
ನಾಳೆಯೇ ಪಕ್ಷಕ್ಕೆ ರಾಜೀನಾಮೆ, ನವೆಂಬರ್ 13ರಂದು ಕಾಂಗ್ರೆಸ್ ಸೇರುತ್ತೇನೆ: ಬಿಜೆಪಿ ಮಾಜಿ ಶಾಸಕ ರಾಜು ಕಾಗೆಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು, ಪಕ್ಷದಿಂದ ಟಿಕೆಟ್ ನೀಡುವ ಭರವಸೆ ಸಿಕ್ಕಿದೆ. ಈಗ ಬಿಜೆಪಿಯವರು ಎಷ್ಟೇ ಮನವೊಲಿಸುದರೂ ಪ್ರಯೋಜನವಿಲ್ಲ. ಎಲ್ಲವೂ ನಿರ್ಧಾರವಾಗಿದೆ. ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಸಿಎಂ ಪದವಿ ಕೊಟ್ಟರು ನಾನು ಮರಳಿ ಬಜೆಪಿಗೆ ಸೇರುವುದಿಲ್ಲ
ಬೆಂಗಳೂರು (ನ.11): ಈಗಾಗಲೇ ನಾನು ಬಿಜೆಪಿಯಿಂದ ಹೊರ ಬಂದಿದ್ದೇನೆ. ನಾಳೆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದು, ನ.13ರಂದು ಕಾಂಗ್ರೆಸ್ಗೆ ಅಧಿಕೃತವಾಗಿ ಸೇರ್ಪಡನೆಯಾಗುತ್ತೇನೆ ಎಂದು ಬಿಜೆಪಿ ಬಂಡಾಯನಾಯಕ ರಾಜು ಕಾಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ನ್ಯೂಸ್ 18 ಕನ್ನಡದೊಂದಿಗೆ ಮಾತನಾಡಿರುವ ಅವರು, ಈಗಾಗಲೇ ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಭೇಟಿಯಾಗಿದ್ದು. ಪಕ್ಷ ಸೇರ್ಪಡನೆ ಕುರಿತು ಮಾತನಾಡಿದ್ದೇನೆ. ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಭರವಸೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದಿದ್ದಾರೆ.
ಕಾಗವಾಡ ಕ್ಷೇತ್ರದಲ್ಲಿ ಪಕ್ಷ ಅನರ್ಹ ಶಾಸಕ ಶ್ರೀಮಂತಗೌಡ ಪಾಟೀಲ್ಗೆ ಟಿಕೆಟ್ ನೀಡಲು ಮುಂದಾಗಿರುವ ಹಿನ್ನೆಲೆ ಕ್ಷಿಪ್ರ ರಾಜಕೀಯಕ್ಕೆ ಮುಂದಾದ ರಾಜು ಕಾಗೆ ಈ ನಿರ್ಧಾರ ಪ್ರಕಟಿಸಿದ್ದಾರೆ. ಈಗ ನಾನು ಮನೆಯಲ್ಲಿ ಕೂತರೆ ಜೀವನಪರ್ಯಂತ ಮನೆಯಲ್ಲಿಯೇ ಕೂರಬೇಕಾಗುತ್ತದೆ. ಕಳೆದ ಬಾರಿ ಕಡಿಮೆ ಅಂತರಗಳಿಂದ ಸೋತಿದ್ದೇನೆ. ಈಗ ಪಕ್ಷ ಟಿಕೆಟ್ ನೀಡಲು ನಿರಾಕರಿಸಿದೆ. ಈ ಕುರಿತು ಯಡಿಯೂರಪ್ಪ ಕೂಡ ಒಮ್ಮೆ ಮಾತುಕತೆ ನಡೆಸಿದರು.
Comments
Post a Comment