ಬ್ರೇಕಿಂಗ್ ನ್ಯೂಸ್ !! ಅಧ್ಯಕ್ಷರನ್ನು ಬದಲಿಸಿದ ಕರ್ನಾಟಕ ಬಿಜೆಪಿ , ನೂತನ ಅಧ್ಯಕ್ಷರಾಗಿ ಅಧಿಕಾರ ಪಡೆದುಕೊಂಡ ಯಡಿಯೂರಪ್ಪ ಆಪ್ತ


ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷರ ನೇಮಕದ ಬಳಿಕ ಜಿಲ್ಲಾ ಸಂಘಟನೆಯತ್ತ ಗಮನ ಹರಿಸಿದೆ. 12 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಮಂಗಳವಾರ ಬಿಜೆಪಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಬಿಜೆಪಿ ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ಜನವರಿ 16ರಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನೂತನ ರಾಜ್ಯಾಧ್ಯಕ್ಷರ ನೇಮಕದ ಚುನಾವಣೆ ನಡೆದಿತ್ತು. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ 2020-2023 ನೇ ಸಾಲಿಗೆ ನೇಮಕಗೊಂಡಿದ್ದರು.

ಜನವರಿ 20ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ನಡೆದಿತ್ತು. ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಜೆ. ಪಿ. ನಡ್ಡಾ ಆಯ್ಕೆಯಾಗಿದ್ದರು. ಈಗ ಜಿಲ್ಲಾ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಬಿಜೆಪಿ ಜಿಲ್ಲಾಧ್ಯಕ್ಷರು
ನೂತನ ಅಧ್ಯಕ್ಷರ ಪಟ್ಟಿ
* ಮೈಸೂರು ನಗರ - ಶ್ರೀವತ್ಸ

* ಮೈಸೂರು ಗ್ರಾಮಾಂತರ - ಎಸ್. ಡಿ. ಮಹೇಂದ್ರ

* ಚಾಮರಾಜನಗರ - ಆರ್. ಸುಂದರ್

* ಉಡುಪಿ - ಕುಯ್ಲಾಡಿ ಸುರೇಶ್ ನಾಯಕ್

ನೂತನ ಅಧ್ಯಕ್ಷರು
ಬಿಜೆಪಿ ಜಿಲ್ಲಾಧ್ಯಕ್ಷರು
* ಉತ್ತರ ಕನ್ನಡ - ವೆಂಕಟೇಶ್ ನಾಯಕ್

* ಬಾಗಲಕೋಟೆ - ಶಾಂತಪ್ಪ ಗೌಡ ತೀರ್ಥಪ್ಪ ಗೌಡ ಪಾಟೀಲ್

* ರಾಯಚೂರು - ರಮಾನಂದ ಯಾದವ್

ಕರ್ನಾಟಕ ಬಿಜೆಪಿ
ಬಿಜೆಪಿಯ ನೂತನ ಅಧ್ಯಕ್ಷರು
* ಬಳ್ಳಾರಿ - ಚನ್ನಬಸವಗೌಡ ಪಾಟೀಲ್

* ದಾವಣಗೆರೆ - ವೀರೇಶ ಹನಗವಾಡಿ

* ಬೆಂಗಳೂರು ಗ್ರಾಮಾಂತರ - ಎ. ವಿ. ನಾರಾಯಣಸ್ವಾಮಿ

ಯಾವ ಜಿಲ್ಲೆಗೆ ಯಾರು?
ಜಿಲ್ಲಾಧ್ಯಕ್ಷರು
* ಬೆಂಗಳೂರು ಕೇಂದ್ರ - ಜೆ. ಮಂಜುನಾಥ್

* ಬೆಂಗಳೂರು ದಕ್ಷಿಣ - ಎನ್. ಆರ್. ರಮೇಶ್

Comments