ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ‘ಕೆಪಿಸಿಸಿ ಅಧ್ಯಕ್ಷ‘ ಪಟ್ಟ: ಮಾತು ಕೊಟ್ಟು ಸಂಕಷ್ಟಕ್ಕೆ ಸಿಲುಕಿತೇ ಹೈಕಮಾಂಡ್?
ನಾನೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎನ್ನುತ್ತಿರುವವರ ಪೈಕಿ ಬಹುತೇಕ ಸಿದ್ದರಾಮಯ್ಯ ಆಪ್ತರೇ ಇದ್ದಾರೆ. ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಕೂಡ ಸಿದ್ದರಾಮಯ್ಯ ಆಪ್ತರಾಗಿದ್ದಾರೆ ಎಂಬುದು ಗೊತ್ತಿರುವ ಸಂಗತಿ. ಇನ್ನು, ಎಂ.ಬಿ ಪಾಟೀಲ್ ಮತ್ತು ಮಾಜಿ ಸಚಿವ ಕೃಷ್ಣಬೈರೇಗೌಡ ಕೂಡ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
SHARE THIS:
ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ‘ಕೆಪಿಸಿಸಿ ಅಧ್ಯಕ್ಷ‘ ಪಟ್ಟ: ಮಾತು ಕೊಟ್ಟು ಸಂಕಷ್ಟಕ್ಕೆ ಸಿಲುಕಿತೇ ಹೈಕಮಾಂಡ್?
NEWS18-KANNADA
LAST UPDATED:JANUARY 8, 2020, 8:54 AM IST
ಬೆಂಗಳೂರು(ಜ.08): ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುತ್ತೇವೆ ಎಂದು ಮಾತು ಕೊಟ್ಟು ಕಾಂಗ್ರೆಸ್ ಹೈಕಮಾಂಡ್ ಪೇಚಿಗೆ ಸಿಲುಕಿದೆ ಎಂಬ ಮಾತುಗಳು ರಾಜಕೀಯದಲ್ಲಿ ಕೇಳಿ ಬರುತ್ತಿವೆ. ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆಯಾಗುವ ವೇಳೆ ಹೈಕಮಾಂಡ್ ಸೋನಿಯಾ ಗಾಂಧಿ ಅವರನ್ನು ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದರು. ಆಗ ಡಿ.ಕೆ ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡುವುದಾಗಿ ಹೈಕಮಾಂಡ್ ಭರವಸೆ ನೀಡಿದ್ದರು. ಆದರೀಗ ಡಿ.ಕೆ ಶಿವಕುಮಾರ್ಗೆ ಕರ್ನಾಟಕ ಪ್ರಾದೇಶಿಕ ಸಮಿತಿ ಅಧ್ಯಕ್ಷ ಸ್ಥಾನ ನೀಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಎರಡು ದಿನಗಳ ಹಿಂದೆ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದರು ಎನ್ನಲಾಗುತ್ತಿದೆ.
Comments
Post a Comment